ರಾಯಚೂರು: ಮರ್ಚೇಟ್ಹಾಳ ಹಾಗೂ ರಾಯಚೂರು ನಡುವೆ ಎಲ್ ಸಿ ಸಂಖ್ಯೆ 216 ಹಾಗೂ 217ರ ದ್ವಿಪಥದ ರೈಲ್ವೆ ಮೇಲ್ಸೇತುವೆ ನಿರ್ಮಣ ಕಾರ್ಯಕ್ಕೆ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಬೇಕಿದ್ದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿರುವುದಾಗಿ ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ಅವರು ತಿಳಿಸಿದ್ದಾರೆ. ಇದೇ ಜುಲೈ 8 ರಂದು ವಿ.ಸೋಮಣ್ಣ ಅವರು ಈ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಕೇಂದ್ರ ಸರ್ಕಾರದ ಮಂತ್ರಿ ಮಂಡಲ ಪುನರ್ ರಚನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ದೆಹಲಿಯಲ್ಲಿ ಉಳಿದಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದು ಶಂಕುಸ್ಥಾಪನೆ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.





Recent Comments