ರಾಯಚೂರು,ಆ.೨-ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಸಂಬಂಧ ಇಂದು ನಡೆಯುತ್ತಿರುವ ಲಿಖಿತ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಪರೀಕ್ಷೆಗಳು ಯಾವುದೇ ಸಮಸ್ಯೆಗಳಾಗದಂತೆ ಸುಸೂತ್ರವಾಗಿ ನಡೆಸಿಕೊಂಡು ಹೋಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ನಗರದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಎಸ್ಪಿ ಅರುಣ್ಷಾಂಗಿರಿ ಬೇಟಿ ನೀಡಿದರು.





Recent Comments