ರಾಯಚೂರು,ಜು.೧- ಜಿಲ್ಲೆಯಲ್ಲಿ ಮಳೆ ಅಭಾವದಿಂದ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಜು.೩ ರಂದು ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ನಗರಕ್ಕೆ ಆಗಮಿಸಲಿದ್ದಾರೆ.ಜು.೩ ರಂದು ಮಧ್ಯಾನ್ಹ ೩ ಗಂಟೆಗೆ ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.ಮಳೆ ಕೊರತೆಯಿಂದ ಬಿತ್ತನೆ ಕುಸಿತ ಕಂಡಿದೆ. ಗಣೇಕಲ್ ಮತ್ತು ರಾಂಪುರ ಜಲಾಶಯ ನೀರಿನ ಅಭಾವದಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು ವಿವಿಧ ಇಲಾಖೆಗಳ ಅಧಿಕಾರಿ ಗಳೊಂದಿಗೆ ಚರ್ಚಿಸಲಿದ್ದಾರೆ.





Recent Comments