ರಾಯಚೂರು ,ಜು.೫- ವಾಯುವಿಹಾರ ಮಾಡುತ್ತಿದ್ದಾಗ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದು ಯುವಕನೋರ್ವ ಮೃತ ಪಟ್ಟ ಘಟನೆ ಮಾನವಿ ತಾಲೂಕಿನ ಅಮರೇಶ್ವರ ಕ್ಯಾಂಪ ಬಳಿ ಬೆಳಗಿನ ಜಾವ ನಡೆದಿದೆ.ಅಪಘಾತದಲ್ಲಿ ಪಾದಚಾರಿ ರಾಜ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.ರಾಜು ಎಂಬಾತ ಹೆದ್ದಾರಿ ಪಕ್ಕದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆಅಪಘಾತದಲ್ಲಿ ಬೈಕ್ ಸವಾರ ಮಾರಪ್ಪ ಗಂಭೀರವಾಗಿ ಗಾಯಗೊಂಡಿದ್ದು ರಾಯಚೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಮಾನವಿ ಪೊಲೀಸ್ ರು ತನಿಖೆ ಪ್ರಾರಂಭಿಸಿದ್ದಾರೆ.





Recent Comments